ಹೆಸರಘಟ್ಟ ರಸ್ತೆ ಬಳಿಯ ಡಾ.ಶಿವರಾಂ ಕಾರಂತರ ಬಡಾವಣೆ 17 ಗ್ರಾಮಗಳಲ್ಲಿ 3564 ಎಕರೆ ಜಮೀನು ಸ್ವಾಧೀನ ಮಾಡಿ, ಸಾರ್ವಜನಿಕರಿಗೆ ನಿವೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ನೋಟಿಫೈ ಮಾಡಲು ಆದೇಶ ನೀಡಿತ್ತು. ಅಂತೆಯೇ, ನಿವೇಶ ಹಂಚಿಕೆ ಸಂಬಂಧ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.