ಖಾಸಗಿ ಲೇವಾದೇವಿಗಾರರ ಕಿರುಕುಳದಿಂದ ತಪ್ಪಿಸಲು 24/7 ಸಹಾಯವಾಣಿಗೆ ಚಿಂತನೆ

ಸಣ್ಣ ರೈತರು, ಕೂಲಿ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗದವರಿಗೆ ಖಾಸಗಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಣ್ಣ ರೈತರು, ಕೂಲಿ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗದವರಿಗೆ ಖಾಸಗಿ ಲೇವಾದೇವಿಗಾರರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯ ಪೊಲೀಸ್ ಮುಖ್ಯಸ್ಥರು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರು ಮತ್ತು ಆಯುಕ್ತರು ಸಹಾಯವಾಣಿಯನ್ನು ತೆರೆಯಬೇಕೆಂದು ನಿರ್ದೇಶಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಘಟಕಗಳ ಮುಖ್ಯಸ್ಥರಿಗೆ ನಿನ್ನೆ ಆದೇಶ ಹೊರಡಿಸಿದ ರಾಜ್ಯ ಡಿಜಿ ಮತ್ತು ಐಜಿಪಿ ನೀಲಮಣಿ ರಾಜು, 24/7 ಸಹಾಯವಾಣಿಯನ್ನು ಆರಂಭಿಸಿ ಅದನ್ನು ಸಬ್ ಇನ್ಸ್ ಪೆಕ್ಟರ್ ರ್ಯಾಂಕಿನ ಅಧಿಕಾರಿಗಳು ನಿರ್ವಹಿಸಬೇಕು, ಮತ್ತು ಜನರಿಂದ ದೂರುಗಳು ಬಂದ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಲೇವಾದೇವಿಗಾರರ ಕಾಯ್ದೆ-1961, ಕರ್ನಾಟಕ ಪಾನ್ ಬ್ರೋಕರ್ಸ್ ಕಾಯ್ದೆ-1961, ಚಿಟ್ ಫಂಡ್ ಕಾಯ್ದೆ-1982 ಮತ್ತು ಕರ್ನಾಟಕ ಪ್ರೊಹಿಬೀಷನ್ ಆಫ್ ಚಾರ್ಜಿಂಗ್ ಎಕ್ಸೊರ್ಬಿಟೆಂಟ್ ಇಂಟರೆಸ್ಟ್ ಕಾಯ್ದೆ-2004 ರಡಿ  ಜನರಿಗೆ ಕಿರುಕುಳ ನೀಡುವ ಖಾಸಗಿ ಲೇವಾದೇವಿಗಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನೀಲಮಣಿ ರಾಜು ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com