ಉಡುಪಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು (ಸೆ. 10) ನಡೆಯುತ್ತಿರುವ ಭಾರತ್ ಬಂದ್ ವೇಳೆ ಉಡುಪಿ ನಗರದಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘರ್ಷಣೆಯಲ್ಲಿ ತೊಡಗಿದ್ದು ಕಾನೂನು ಉಲ್ಲಂಘನೆಯಾಗುವ ಹಿನ್ನೆಲೆಯಲ್ಲಿ ನಗರದಾದ್ಯಂತ ನಾಳೆ ಬೆಳಿಗ್ಗೆವರೆವಿಗೆ ನಿಷೇಧಾಜ್ಞೆ 144 ಸೆಕ್ಷನ್) ಜಾರಿಗೊಳಿಸಲಾಗಿದೆ.