ಮಂಡ್ಯ: ಸಾಲ ಬಾಧೆ ತಾಳಲಾರದೇ ಮಂಡ್ಯದಲ್ಲಿ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೋಮವಾರ ತಡರಾತ್ರಿ ಮದ್ದೂರಿನ ಮಾಲಗಾರನಹಳ್ಳಿ ಎಂಬಲ್ಲಿ ರಾಜೇಶ್ (45) ಎನ್ನುವ ರೈತ ಸಾವನ್ನಪ್ಪಿದ್ದಾನೆ.
ರಾಜೇಶ್ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದಾರೆ. ನನ್ನ ಅಂತ್ಯಕ್ರಿಯೆಗೆ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ನಟ ಅಂಬರೀಶ್ ಬರಲೇಬೇಕು, ಅವರ ಸಮ್ಮುಖದಲ್ಲಿ ನನ್ನ ಅಂತ್ಯಕ್ರಿಯೆ ನಡೆಸಬೇಕು ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ.
ರಾಜೇಶ್ 5 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈಸಾಲವಾಗಿ ಸುಮಾರು 5 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.