ಮೈಸೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದ ರಾಜ್ಯ ಸರ್ಕಾರ ಇದೀಗ ಮಹಿಳೆಯನ್ನು ಸಮಾಧಾನ ಪಡಿಸಲು ಗೌರಿ-ಗಣೇಶ ಹಬ್ಬಕ್ಕೆ ರೇಷ್ಮೆ ಸೀರೆ ನೀಡಲು ಮುಂದಾಗಿದ್ದು, ಸೀರೆ ಖರೀದಿಗೆ ಮಹಿಳೆಯರು ನಾ ಮುಂದು, ತಾ ಮುಂದು ಎಂದು ಮುಗಿಬಿದ್ದಿದ್ದಾರೆ.