ಹೂವಿನ ವ್ಯಾಪಾರಿಯಾಗಿದ್ದ ಗಿರಿ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ದುರ್ಗಿಗುಡಿ ರಸ್ತೆಯ ಸೂರ್ಯ ಕಂಫರ್ಟ್ ಹೊಟೇಲ್ ಸಮೀಪ ಕಾರಿನಲ್ಲಿ ತೆರಳುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿದ್ದಲ್ಲದೆ ಮಾರಕಾಸ್ತ್ರಗಳಿಂದ ಗಿರಿ ಮೇಲೆ ಹಲ್ಲೆ ನಡೆಸಿದ್ದಾರೆ. ಹತ್ಯೆ ಮಾಡಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದರೆ ಗಿರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.