ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ ಸಂದರ್ಭದಲ್ಲಿ ಶಿವಕುಮಾರ್ ಮತ್ತವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ಐಟಿ ಕಾಯ್ದೆ ಸೆಕ್ಷನ್ 277, 278, 193,199 ಹಾಗೂ 120 (ಬಿ) ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಹಣಕಾಸು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ಹರಿದು ಹಾಕಿ, ಸಾಕ್ಷ್ಯ. ನಾಶಪಡಿಸಿದ ಆರೋಪವೂ ಸಚಿವರ ವಿರುದ್ಧ ದಾಖಲಾಗಿದೆ.