ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ, ಮಗನ ಸಾವಿನ ಸುದ್ದಿ ಕೇಳಿ ತಂದೆ ಕೂಡ ಸಾವು!

ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶಿವಮೊಗ್ಗ: ಪುತ್ರ ಶೋಕಂ ನಿರಂತರಂ ಅನ್ನುವಂತೆ ಮಗನ ಸಾವಿನ ಸುದ್ದಿ ಕೇಳಿದ ತಂದೆ ಕೂಡ ಆಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 
ಮೆದುಳು ನಿಷ್ಕ್ರಿಯಗೊಂಡಿರುವುದರಿಂದ 32 ವರ್ಷದ ಹರೀಶ್ ಬದುಕುಳಿಯುವುದಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆತನ ತಂದೆ 59 ವರ್ಷದ ಬಾಲಕೃಷ್ಣ ಎಂಬುವರು ಆಘಾತಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಒಂದೇ ಮನೆಯಲ್ಲಿ ಎರಡೆರಡು ಸಾವಿನ ಸುದ್ದಿಯಿಂದ ಸಂಬಂಧಿಕರು, ಜೇಡಿಕಟ್ಟೆ ಗ್ರಾಮ ಹಬ್ಬದ ಮಾರನೇ ದಿನವೇ ಸೂತಕದ ಛಾಯೆಯಲ್ಲಿದೆ. 
ಇನ್ನು ಹರೀಶ್ ಬದುಕುಳಿಯುವುದಿಲ್ಲ ಎಂದು ತಿಳಿದ ಪೋಷಕರು ಮಗನ ಅಂಗಾಂಗ ದಾನ ಮಾಡಲು ತೀರ್ಮಾನಿಸಿದ್ದು ಅದರಂತೆ ಆತನ ದೇಹವನ್ನು ಶುಕ್ರವಾರ ಬೆಳಗ್ಗೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಕೊಂಡೊಯ್ಯಲಾಯಿತು. 
ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವೈದ್ಯರು ಯುವಕನ ಅಂಗಾಂಗಗಳನ್ನು ತೆಗೆದುಕೊಂಡಿದ್ದು ನಂತರ ಯುವಕನ ಮೃತದೇಹವನ್ನು ಭದ್ರಾವತಿಯ ಜೇಡಿಕಟ್ಟೆಗೆ ರವಾನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com