ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಎಲ್ಲ ಇಲಾಖೆಗಳಲ್ಲೂ ಗುರಿ ಮೀರಿ ತೆರಿಗೆ ಸಂಗ್ರಹವಾಗಿರುವುದನ್ನು ಹಾಗೂ ಅಭಿವೃದ್ಧಿ ಚಟುವಟಿಕೆ ಸೇರಿ ರೈತರ ಸಾಲ ಮನ್ನಾ ಹಣಕಾಸಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಮಾಹಿತಿ ಇಲಾಖಾವಾರು ಅಧಿಕಾರಿಗಳಿಂದ ಸಿಕ್ಕ ನಂತರ ಮುಖ್ಯಮಂತ್ರಿಗಳು ತೈಲದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ .