ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ಪ್ರತಿಯಾಗಿ ಸರಕಾರ ರೈತರಿಗೆ ಈ ವಾಗ್ದಾನ ನೀಡಿದೆ. , ಬಾಕಿ ಹಣವನ್ನು ತಿಂಗಳೊಳಗೆ ಕೊಡಿಸುವುದಾಗಿ ಭರವಸೆ ನೀಡಿದೆ. ರಾಜ್ಯದ ನಾನಾ ಭಾಗದಿಂದ ಆಗಮಿಸಿದ್ದ ಸಾವಿರಾರು ಕಬ್ಬು ಬೆಳೆಗಾರರು ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ ಅವರನ್ನು ಪೊಲೀಸರು ತಡೆದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಅಕಾಶ ಕಲ್ಪಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮುಖಂಡರು ಮಾತನಾಡಿ ಬೇಡಿಕೆ ಈಡೇರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.