ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ಕೆಲವು ಗೊಂದಲಗಳಿದ್ದ ಕಾರಣ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ್ದರು. ರಾಜ್ಯ ಆಡಿಟರ್ ಜನರಲ್ ಅವರಿಂದ ಸ್ಪಷ್ಟನೆ ಪಡೆದ ಬಳಿಕ ಜಿಲ್ಲಾಧಿಕಾರಿಗಳಿಗೆ ಆಡಳಿತವನ್ನು ವಹಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಅಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.