ನ್ಯಾಯಾಲಯದ ತರಾಟೆಗೆ ತೆಗೆದುಕೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತರು, ಜಲಮಂಡಳಿ, ಬೆಸ್ಕಾಂ, ಬಿಡಿಎ ಸಂಸ್ಥೆ ಸೇರಿದಂತೆ ನಗರದ ವಿವಿಧ ಸಂಸ್ಥೆಗಳು ರಸ್ತೆ ಗುಂಡಿ ಮುಚ್ಚುವುದಕ್ಕೆ ಸಹಕರಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ. ಅಲ್ಲದೇ ರಸ್ತೆ ನಿರ್ವಹಣೆ ಅವಧಿ ಬಾಕಿ ಇರುವ ಗುತ್ತಿಗೆದಾರರು ರಸ್ತೆ ಗುಂಡಿ ಮುಚ್ಚುವುದಕ್ಕೆ ಮುಂದಾಗಬೇಕೆಂದು ಮೇಯರ್ ಸಂಪತ್ ರಾಜ್ ತಿಳಿಸಿದ್ದಾರೆ.