ಈ ಕುರಿತು ದೇವೇಗೌಡ ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ನನಗೆ ಅಂತಹ ಯಾವುದೇ ಪತ್ರಗಳೂ ಬಂದಿಲ್ಲ. ಉಪ ಮುಖ್ಯಮಂತ್ರಿಗಳು ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆಂಬುದರ ಬಗ್ಗೆ ಮಾಹಿತಿ ಬಂದಿದೆ. ವಿಶ್ವವಿದ್ಯಾಲಯವೊಂದರಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿತ್ತು. ಈ ಕುರಿತು ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.