ಅಳ್ಳಾಲ ಸಂದ್ರದ ಕಾಂಗ್ರೆಸ್ ಯುವ ನಾಯಕ ಅರುಣ್ ಹತ್ಯೆ ನಡೆಸಿದ ಆರೋಪಿಗಳ ಸುಳಿವು ಖಚಿತಪಡಿಸಿಕೊಂಡಿದ್ದ ವಿದ್ಯಾರಣ್ಯಪುರ ಹಾಗೂ ಯಲಹಂಕ ಪೋಲೀಸರು ಬುಧವಾರ ಬೆಳಿಗ್ಗೆ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ. ಆ ವೇಳೆಗೆ ಆರೋಪಿಗಳು ಮಾರಕಾಸ್ತ್ರಗಳಿಂದ ಪೋಲೀಸರ ಮೇಲೆ ದಾಳಿಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಪೋಲೀಸರು ಗುಂಡು ಹಾರಿಸಿದ್ದಾರೆ.