ಸೆ.26 ರಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಈ ಬಳಿಕ ದುನಿಯಾ ವಿಜಯ್, ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಸೆ.27 ರಂದು ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸೆಷನ್ಸ್ ಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ಕ್ಕೆ ಮುಂದೂಡಿದ್ದು, ಆಕ್ಷೇಪಣೆಗಳ್ದಿದರೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚನೆ ನೀಡಿದೆ.