ಬುಧವಾರ ಮನೆಗೆ ಬಂದ ಮಂಜು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಶೆಟ್ಟಿ ಮಗನ ಸಾವಿನ ಸುದ್ದಿ ಕೇಳುತ್ತಲೇ ಕೊನೆಯುಸಿರೆಳೆದಿದ್ದಾರೆ. ಇದನ್ನು ತಿಳಿದ ಬೂಕನಕೆರೆ ಗ್ರಾಮಸ್ಥರು ಉಳಿದ ಬಿಲ್ ಪಾವತಿ ಮಾಡಿ ಈರಣ್ಣ ಶವವನ್ನು ಗ್ರಾಮಕ್ಕೆ ತಂದಿದ್ದಾರೆ, ತಂದೆ ಮಗನ ಸಾವಿಗೆ ಗ್ರಾಮಸ್ಥರು ಕಣ್ಣೀರು ಹಾಕಿ ವಿಧಿಯನ್ನು ಶಪಿಸಿದ್ದಾರೆ.