ಈ ಹಿಂದೆ ನಟಿ ಜಯಮಾಲ ಅವರು ಅಯ್ಯಪ್ಪಸ್ವಾಮಿ ಗರ್ಭಗುಡಿ ಪ್ರವೇಶಿಸಿ ಪಾದ ಸ್ಪರ್ಶ ಮಾಡಿದ್ದೆ ಎಂದು ಹೇಳಿ ದೇಗುಲ ಸಮಿತಿ ಹಾಗೂ ಕೇರಳದ ಭಕ್ತರ ಕೋಪಕ್ಕೆ ತುತ್ತಾಗಿದ್ದರು. ದೇವಸ್ಥಾನದ ಜ್ಯೋತಿಷಿ ಉನ್ನಿಕೃಷ್ಣನ್ ಪಣಿಕ್ಕರ್, ಅವರ ಸಹಾಯಕ ರಘುಪತಿ ಮತ್ತು ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ರಾಜಶೇಖರ್ ಇನ್ನಿತರರು ಕೂಡಾ ಆರೋಪಿಗಳಾಗಿ ಕೋರ್ಟ್ ಮೆಟ್ಟಿಲೇರಿದಿದ್ದರು. ಆದರೆ, ಕೊನೆಗೆ ಜಯಮಾಲಾ ಅವರನ್ನು ನಿರ್ದೋಷಿ ಎಂದು ಕೋರ್ಟ್ ಘೋಷಿಸಿತ್ತು.