ಗೌರಿ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ನಮ್ಮನ್ನು ಗುರಿ ಮಾಡುತ್ತಿದ್ದಾರೆ. ನಾವು ಯಾವ ತಪ್ಪನ್ನೂ ಮಾಡಿಲ್ಲ. ಅಧಿಕಾರಿಗಳು ನಮ್ಮಿಂದ ಬಲವಂತವಾಗಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಒಬ್ಬ ಅಧಿಕಾರಿ ಹೊಡೆದು ಬೆದರಿಸಿದರೆ, ಮತ್ತೊಬ್ಬರು ತಪ್ಪು ಒಪ್ಪಿಕೊಂಡರೆ ಹಣ ನೀಡುವುದಾಗಿ ಆಮಿಷವೊಡ್ಡುತ್ತಿದ್ದಾರೆ. ಇನ್ನೂ ಕೆಲ ಅಧಿಕಾರಿಗಳು ಹೊಡೆಯುತ್ತಾರೆಂದು ಆರೋಪಿಸಿದ್ದಾರೆ.