ಯೋಜನೆಯಲ್ಲಿ ಐದು ಬೈಪಾಸ್ ನಿರ್ಮಾಣ ಕಾಮಗಾರಿಗಳೂ ಸಹ ಸೇರಿದ್ದು ಬಿಡದಿ, ರಾಮನಗರ, ಮತ್ತು ಚೆನ್ನಪಟ್ಟಣ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ಬೈಪಾಸ್ ನಿರ್ಮಾಣವಾಗಲಿದೆ. ಹೆದ್ದಾರಿಯು ಸಂಪೂರ್ಣವಾಗಿ ಆಕ್ಸೆಸ್ ಕಂಟ್ರೋಲ್ ಸೌಲಭ್ಯ ಹೊಂದಿರಲಿದೆ. ಜತೆಗೆ ಎರಡೂ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನೂ ಒಳಗೊಳ್ಳಲಿದೆ. ಪ್ರಯಾಣಿಕರ ಸುರಕ್ಷತೆ ಗಮನದಲ್ಲಿರಿಸಿಕೊಂಡು ರಸ್ತೆಯಲ್ಲಿ ಅಂಡರ್ ಪಾಸ್, ಓವರ್ ಪಾಸ್ ಗಳ ನಿರ್ಮಾಣ ಹಾಗೂ ಅವುಗಳಲ್ಲಿ ಲೈಟಿಂಗ್ ವ್ಯವಸ್ಥೆ ಸಹ ಕಲ್ಪಿಸಿಕೊಡಲಾಗುವುದು.