1998, 1999 ಹಾಗೂ 2004ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಯ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ, ಅನರ್ಹ ಅಭ್ಯರ್ಥಿಗಳನ್ನು ಕೈಬಿಟ್ಟು, ಅರ್ಹರಿಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಇದನ್ನು ಸುಪ್ರೀಂಕೋರ್ಟ್ ಕೂಡ ಎತ್ತಿಹಿಡಿದಿತ್ತು. ಆದರೆ, ರಾಜ್ಯ ಸರ್ಕಾರ ಈ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ನಗರದ ಎಸ್. ಶ್ರೀನಿವಾಸ್ ಮತ್ತಿತರ ಅಭ್ಯರ್ಥಿಗಳು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.