ಉಡುಪಿ: ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

ಚುನಾವಣೆ ಸಮಯದಲ್ಲಿ ಮನೆಯಲ್ಲಿ ಅಕ್ರಮವಾಗಿ ಹಣ ಇರಿಸಿಕೊಂಡಿದ್ದಾರೆನ್ನುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ: ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ
ಉಡುಪಿ: ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ
Updated on
ಉಡುಪಿ: ಚುನಾವಣೆ ಸಮಯದಲ್ಲಿ ಮನೆಯಲ್ಲಿ ಅಕ್ರಮವಾಗಿ ಹಣ ಇರಿಸಿಕೊಂಡಿದ್ದಾರೆನ್ನುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿಯಾದ ಪ್ರಮೋದ್ ಮದ್ವರಾಜ್ ಬೆಂಬಲಿಗರೆನ್ನಲಾದ ಉದ್ಯಾವರ ನಿವಾಸಿ  ಫೈನಾನ್ಸ್ ಮ್ಯಾನೇಜರ್ ಕಟ್ಟೆ ಗುಡ್ಡೆ ಸದಾಶಿವ್ ಹಾಗೂ ಪಿತ್ರೋಡಿ ನಿವಾಸಿ ಲಕ್ಷ್ಮಣ ಸಂಪಿಗೆ ನಗರ ಎನ್ನುವವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದಾಶಿವ ಅವರ ಮನೆಯಲ್ಲಿ ಕೆಲ ಗಂಟೆಗಳ ಕಾಲ ದಾಕಲೆ ಪರಿಶೀಲನೆ ನಡೆಸಿದ್ದ ಬಳಿಕ ಅವರನ್ನು ಐಟಿ ಕಛೇರಿಗೆ ಕರೆಸಿ ವಿಚಾರಣೆ ನಡೆಸಿದರೆ ಲಕ್ಷ್ಮಣ ಅವರ ಮನೆ ಶೋಧನೆ ಮಾಡಿದ್ದಾರೆ.
ಇದರ ನಡುವೆ ಶುಕ್ರವಾರ ಬೆಳಿಗ್ಗೆ ಕಟಪಾಡಿ-ಶಿರ್ವ ರಸ್ತೆಯಲ್ಲಿ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1,25,690 ರು. ನಗದನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ವಶಕ್ಕೆ ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com