ಯುಗಾದಿ ದಿನವೇ ಜವರಾಯನ ಅಟ್ಟಹಾಸ: ಬೆಂಗಳೂರು ರಸ್ತೆ ಅಪಘಾತದಲ್ಲಿ ಮೂವರ ಸಾವು

ಯುಗಾದಿ ಹಬ್ಬದಂದೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೊಸೂರು- ಸೂಳೆಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಯುಗಾದಿ ಹಬ್ಬದಂದೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೊಸೂರು- ಸೂಳೆಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಮೃತರ ಗುರುತು ಪತ್ತೆಯಾಗಿಲ್ಲ. ಹಬ್ಬಕ್ಕೆಂದು ಸೂಳೆಗಿರಿ ಕಡೆಯಿಂದ ಹೊಸೂರಿನ ಕಡೆ ಆಗಮಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಗುದ್ದಿದೆ.
ರಸ್ತೆ ಅಪಘಾತಗಳು ಈ ಮಾರ್ಗದಲ್ಲಿ ಮಾಮೂಲಿ ಎನ್ನುವಂತಾಗಿದ್ದರೂ ಸಹ ಲಾರಿಗಳನ್ನು ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸುವುದೇಕೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು  ಹೊಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com