ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮ್ಮಲ್ಲಿ ಪೆನ್ ಡ್ರೈವ್, ಸಿಡಿ ಮತ್ತು ಡೈರಿ ಇದ್ದು ಅದರಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ ಮಾಡಲಾಗಿದೆ ಎಂದು ಕೂಡ ವಿನಯ್ ಹೇಳಿದ್ದು ಪೊಲೀಸರು ಪೆನ್ ಡ್ರೈವ್ ಮತ್ತು ಇತರ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸುವಂತೆ ಹೇಳಿದ್ದಾರೆ. ಸದ್ಯದಲ್ಲಿಯೇ ಕೋರ್ಟ್ ಗೆ ನೀಡುತ್ತೇನೆ ಎಂದು ವಿನಯ್ ತಿಳಿಸಿದ್ದಾರೆ.