ಮಂಗಳೂರು: ಮೋದಿ ರ್ಯಾಲಿ ಬಳಿಕ ಬಸ್ ಮೇಲೆ ಕಲ್ಲು ತೂರಿದ್ದ 7 ಜನರ ಬಂಧನ

ಶನಿವಾರ ಮಂಗಳುರಿನ ನೆಘರೂ ಮೈದಾನದಲ್ಲಿ ಆಯೋಜಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ರ್ಯಾಲೆಗೆ ತೆರಳಿದ್ದ ಬಸ್ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮಂಗಳೂರು: ಶನಿವಾರ ಮಂಗಳುರಿನ ನೆಘರೂ ಮೈದಾನದಲ್ಲಿ ಆಯೋಜಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ರ್ಯಾಲೆಗೆ ತೆರಳಿದ್ದ ಬಸ್ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕುತ್ತಾರು ಮದನಿನಗರದಲ್ಲಿ ಮೊದಿ ಕಾರ್ಯಕ್ರಮ ಮುಗಿಸಿ ವಾಪಾಸಾಗುವಾಗ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿತ್ತು, ಬಸ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆದಿತ್ತು. ಎಂಬ ಆರೋಪದಡಿ ಬಿಜೆಪಿ ಕಾರ್ಯಕರ್ತರು, ಶಾಸಕರಾದ  ಡಾ.ವೈ.ಭರತ್ ಶೆಟ್ಟಿ ಹಾಗೂ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕೊಣಾಜೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.
ಇದರಿಂದ ಎಚ್ಚೆತ್ತ ಪೋಲೀಸ್ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ, ಇನ್ನೂ ಹಲವಾರು ಮಂದಿಯ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ.ಈ ಘಟನೆ ಹಿಂದೆ ರಾಜಕೀಯ ದ್ವೇಷ ಇರಬಹುದು  ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com