ಕೃಷ್ಣಲಾಲ್ ಅವರಿಗೆ ವಂಚನೆಯಲ್ಲಿ ಸಹಕರಿಸುತ್ತಿದ್ದ ಭುವನೇಶ್ವರಿ ನಗರದ ಟೆಲಿಕಾಂ ನಗರದ ದೀಪಕ್ ಕುಮಾರ್, ಗಾಂಧಿ ನಗರದ ಅಮಿತ್ ರಿಕಬ್ ಜೈನ್ ಅವರ ಗಾಂಧಿನಗರ ಹಾಗೂ ಚಿಕ್ಕಪೇಟೆಯ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿರುವ ಅಕ್ರಮ ಆಸ್ತಿ-ಪಾಸ್ತಿಗಳ, ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಹಾಯಕ ಅಭಿಯಂತರ ಕೃಷ್ಣಲಾಲ್ ಅವರ ಸಂಜಯ ನಗರದ ಮನೆ ಸೇರಿ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗಿದೆ ಎಂದು ಎಸಿಬಿಯ ಎಸ್ಪಿ ರಾಜೇಂದ್ರ ಪಾಟೀಲ್ ತಿಳಿಸಿದ್ದಾರೆ.