ಐದು ವರ್ಷಗಳ ಹಿಂದೆ ತಮ್ಮನ್ನು 'ಅತ್ಯಾಚಾರಿ ' ಎಂದು ಕರೆದ ಮಾಜಿ ಸಚಿವೆ ಉಮಾಶ್ರೀ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಹಾಲಪ್ಪ, ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಶನಿವಾರ ಹಾಲಪ್ಪ ವಿಚಾರಣೆಗೆ ಬಂದಾಗ, ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ಐದು ವರ್ಷಗಳ ಕಾಲ ವಿಚಾರಣೆಗೆ ಏಕೆ ಹಾಜರಾಗಲಿಲ್ಲ ಎಂದು ಪ್ರಶ್ನಿಸಿದರು. ಅದಕ್ಕೆ ಹಾಲಪ್ಪ, ಪ್ರಕರಣದ ವಿಚಾರಣೆಗೆ ಹೈಕೋರ್ಟ್ ನ ತಡೆಯಾಜ್ಞೆ ಇತ್ತು ಎಂದು ಸಬೂಬು ಹೇಳಿದರು.