ಈ ಮಧ್ಯೆ, ಜೀವ ಬೆದರಿಕೆ ಹಿನ್ನೆಲೆಯಲ್ಲಿ ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಭದ್ರತೆಗೆ ಕೇಂದ್ರೀಯ ಮೀಸಲು ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ವಶದಲ್ಲಿರುವ ಮನ್ಸೂರ್ ಖಾನ್ ವಿಚಾರಣೆ ವೇಳೆ ತನಗೆ ಜೀವ ಭಯ ಇರುವುದಾಗಿ ಹಾಗೂ ಮುಂಬೈನ ಶಾರ್ಪ್ಶೂಟರ್ಗಳು ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಅಧಿಕಾರಿಗಳು ಮನ್ಸೂರ್ ಭದ್ರತೆಗಾಗಿ ಇಬ್ಬರು ಸಿಆರ್ಪಿಎಫ್ ಇನ್ಸ್ ಪೆಕ್ಟರ್ಗಳ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ನಿಯೋಜನೆ ಮಾಡಿದ್ದಾರೆ.