ತಮಿಳುನಾಡಿಗೆ ಮತ್ತೆ 5 ದಿನ ನೀರು ಬಿಡಿ: ಕಾವೇರಿ ನಿಯಂತ್ರಣ ಸಮಿತಿ

ಕೆಆರ್'ಎಸ್ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ ಮತ್ತೆ ಐದು ದಿನ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನಿಯಂತ್ರಣ ಸಮಿತಿ ತಿಳಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಕೆಆರ್'ಎಸ್ ಮತ್ತು ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ ಮತ್ತೆ ಐದು ದಿನ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನಿಯಂತ್ರಣ ಸಮಿತಿ ತಿಳಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಗುರುವಾರ ನಡೆದ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಕಾವೇರಿ ನೀರು ನಿಯಂತ್ರಣ ಸಮಿತಿ ಬೆಂಗಳೂರಿನಲ್ಲಿ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದು, ಮುಂದಿನ 5 ದಿನಗಳ ಕಾಲ ಯಥಾಸ್ಥಿತಿಯಂತೆ ತಮಿಳುನಾಡು ರಾಜ್ಯಕ್ಕೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. 
ಸಿಡಬ್ಲ್ಯೂಆರ್'ಸಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿಯ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಪ್ರತಿನಿಧಿಗಳು ಸೇರಿ ಒಟ್ಟು 9 ಮಂದಿ ಸದಸ್ಯರಿದ್ದಾರೆ. ಈ ಸಮಿತಿಯ ಸದಸ್ಯರು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾವೇರಿ ವ್ಯಾಪ್ತಿಯ ನಾಲ್ಕೂ ಜಲಾಶಯಗಳ ನೀರಿನ ಮಟ್ಟ ಪರಿಶೀಲಿಸಿ ಈ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಜು.25ರಂದು ನಡೆದ ಸಮತಿ ಸಭೆಯಲ್ಲಿ ಎರಡೂ ಜಲಾಶಯಗಳಿಂದ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಅಷ್ಟೇ ಪ್ರಮಾಣದ ನೀರನ್ನು ಮತ್ತೆ ತಮಿಳುನಾಡು ರಾಜ್ಯಕ್ಕೆ ಹರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com