ಬೆಂಗಳೂರು: ವ್ಹೀಲಿಂಗ್ ವೀರರಿಗೆ ಗ್ರಾಮಸ್ಥರಿಂದ ಧರ್ಮದೇಟು!

ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ.
ನೈಸ್ ರಸ್ತೆಯ ಹೆಮ್ಮಿಗೆಪುರದ ಬಳಿ  ಎರಡು ಸ್ಕೂಟರ್‍ಗಳಲ್ಲಿ ನಾಲ್ವರು ಯುವಕರು ವೀಲಿಂಗ್ ಮಾಡುತ್ತಿರುವುದದನ್ನು ನೋಡಿದ ಹೆಮ್ಮಿಗೆಪುರದ ಗ್ರಾಮಸ್ಥರು ಅವರನ್ನು ತಡೆದು, ಹಿಗ್ಗಾಮುಗ್ಗಾ ಥಳಿಸಿ ಮತ್ತೊಮ್ಮೆ ವೀಲಿಂಗ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ.
ಗ್ರಾಮಸ್ಥರಿಂದ ಗೂಸಾ ತಿಂದ ಯುವಕರ ಹೆಸರು ತಿಳಿದು ಬಂದಿಲ್ಲ. ಗ್ರಾಮಸ್ಥರು ಯುವಕರನ್ನು ಥಳಿಸಿದ್ದು ಅಷ್ಟೇ ಅಲ್ಲದೆ ಸ್ಕೂಟರ್ ಗಳಿಗೆ ಕಲ್ಲು, ಕೋಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.
ಇತ್ತೀಚೆಗಷ್ಟೇ ಸ್ಕೂಟರ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರು ಡಿಕ್ಕಿ ಹೊಡೆದು ಹೆಮ್ಮಿಗೆಪುರದ ಸಿದ್ದಪ್ಪ ಎನ್ನುವರ ಕಾಲು ಮುರಿದಿತ್ತು.ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ವೀಲಿಂಗ್ ಮಾಡುವ ಯುವಕರಿಗೆ ಪಾಠ ಕಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com