'ನಮ್ಮ ಸಿದ್ಧಾಂತದೊಂದಿಗೆ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ನಾವು ಕೊಳಕು ಹೇಳಿಕೆ ಮೂಲಕ ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಬಾರದು. ಅದೂ ನಾವಿಬ್ಬರೂ ನಮ್ಮ ನಮ್ಮ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿರುವುದರಿಂದ ಉತ್ತಮವಾದುದನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದೆ.' ಎಂದು ಪ್ರಕಾಶ್ ರಾಜ್ ಪ್ರತಾಪ್ ಸಿಂಹ ಅವರಿಗೆ ಕಿವಿಮಾತು ಹೇಳಿದ್ದಾರೆ.