ಶಿವಮೊಗ್ಗ: ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಮಹಿಳೆ, ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ
ರಸ್ತೆ ಮೇಲೆ ಮರ ಬಿದ್ದಿರುವ ಚಿತ್ರ
ರಸ್ತೆ ಮೇಲೆ ಮರ ಬಿದ್ದಿರುವ ಚಿತ್ರ
Updated on
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ . ಸಂತ್ರಸ್ತ ಜನರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಬುಧವಾರ ತುಂಗಾ ನದಿ ನೀರಿನಲ್ಲಿ ಸಿಲುಕಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ಕೊಟೆ ಪೊಲೀಸರು ಮಹಿಳೆಯ ಮೃತದೇಹವನ್ನು ಹುಡುಕಿದ್ದಾರೆ. ಮತ್ತೊಂದು ಘಟನೆಯಲ್ಲಿ ಶಿಕಾರಿಪುರ ತಾಲೂಕಿನ ಚಿಕ್ಕಂಗಡಿ ಗ್ರಾಮದ ರೈತರಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. 
ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೆಸ್ಕಾಂಗೆ ತಹಸೀಲ್ದಾರ್ ನಿರ್ದೇಶಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಶಿಕಾರಿಪುರದ ಐದು ಹಾಗೂ ಸೊರಬ ತಾಲೂಕಿನ ನಾಲ್ಕು ಹಳ್ಳಿಗಳಲ್ಲಿ ವಿದ್ಯುತ್  ಕಂಬಗಳು ನೆಲಕ್ಕುರುಳಿ ಬಿದಿದ್ದು, ವಿದ್ಯುತ್ ಪೂರೈಕೆಗೆ ಅಡ್ಡಿಯುಂಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com