ಜಿಲ್ಲಾಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡುವ ಭಾಗ್ಯ!

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡುವ ಭಾಗ್ಯ!
Updated on

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಇದೇ 15 ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಉಪ ವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಸೀಲ್ದಾರ್ ಅವರು ಧ್ವಜಾರೋಹಣ ಮಾಡಬೇಕು. ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿನ ನೆರೆಯ ಕಾರಣದಿಂದಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com