ಬೆಂಗಳೂರು: ಕಾಂಗ್ರೆಸ್ ಮುಖಂಡ ನೇಣಿಗೆ ಶರಣು

ಕಾಂಗ್ರೆಸ್ ಮುಖಂಡನೋರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ಯಲಹಂಕ ನ್ಯೂಟೌನ್‍ನಲ್ಲಿ ಮಂಗಳವಾರ ರಾತ್ರಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಾಂಗ್ರೆಸ್ ಮುಖಂಡನೋರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ಯಲಹಂಕ ನ್ಯೂಟೌನ್‍ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ವೀರಣ್ಣ ಗೌಡ (50) ಆತ್ಮಹತ್ಯೆಗೆ ಶರಣಾದ ಮುಖಂಡ. ಅವರು ಮೂಲತಃ ಹೆಸರುಘಟ್ಟ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 7:30ರ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವೀರಣ್ಣ ಗೌಡ ತಮ್ಮನ್ನು ಗುರುತಿಸಿಕೊಂಡಿದ್ದರು. ಅಲ್ಲದೆ, ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದರು. ಕೆಲ ದಿನಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com