ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉಚಿತ ಮಾರ್ಕ್ಸ್ ಕಾರ್ಡ್ಸ್ ನೀಡಬೇಕು- ಎನ್. ರವಿಕುಮಾರ್ 

ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ಸ್ ಮತ್ತಿತರ ದಾಖಲಾತಿಗಳನ್ನು ಉಚಿತವಾಗಿ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಎನ್. ರವಿಕುಮಾರ್
ಎನ್. ರವಿಕುಮಾರ್
Updated on

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ಸ್ ಮತ್ತಿತರ ದಾಖಲಾತಿಗಳನ್ನು ಉಚಿತವಾಗಿ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಒತ್ತಾಯಿಸಿದ್ದಾರೆ.

ಪ್ರವಾಹದಿಂದಾಗಿ ಅನೇಕ ಮನೆಗಳು ಜಲಾವೃತಗೊಂಡು ಹಾಳಾಗಿರುವುದರಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಕಳೆದುಕೊಂಡಿದ್ದಾರೆ ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ರವಿಕುಮಾರ್ ಪತ್ರ ಬರೆದಿದ್ದಾರೆ.

ಇಂತಹ ವಿದ್ಯಾರ್ಥಿಗಳಿಗೆ ಮಾನವಿಯತೆ ಆಧಾರದ ಮೇಲೆ ಯಾವುದೇ ಹಣ ಪಡೆಯದೆ ಉಚಿತವಾಗಿ ಅಂಕಪಟ್ಟಿ ಮತ್ತಿತರ ದಾಖಲಾತಿ ಪತ್ರಗಳನ್ನು ನೀಡಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com