ಅನಾರೋಗ್ಯಕ್ಕೀಡಾಗಿದ್ದ ನವಜಾತ ಹೆಣ್ಣು ಶಿಶುವನ್ನು ಮೊದಲ ಮಹಡಿಯಿಂದ ಎಸೆದ ಅಜ್ಜಿ

ಅನಾರೋಗ್ಯದಿಂದ ಬಳಲುತ್ತಿದ್ದ ನವಜಾತ ಶಿಶುವನ್ನು  ಹುಟ್ಟಿದ ಮಗು ಹುಟ್ಟಿದ ಒಂಭತ್ತೇ ದಿನಕ್ಕೆ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನವಜಾತ ಶಿಶುವನ್ನು  ಹುಟ್ಟಿದ ಮಗು ಹುಟ್ಟಿದ ಒಂಭತ್ತೇ ದಿನಕ್ಕೆ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತಮಿಳ್ ಸೆಲ್ವಿ ಮಗುವನ್ನು ಕಳೆದುಕೊಂಡ ನತದೃಷ್ಟೆ. ಮಗುವಿನ ಅಜ್ಜಿ ಪರಮೇಶ್ವರಿ ಮೇಲೆ ಸೆಲ್ವಿ ಕೊಲೆಯ ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಅವರು ಪೊಲೀಸ್​ ಠಾಣೆಗೂ ದೂರು ನೀಡಿದ್ದಾರೆ.

“ನಿನ್ನೆ ರಾತ್ರಿ ಮಗುವಿಗೆ ಹಾಲುಣಿಸಿ ಆಟವಾಡಿಸುತ್ತಿದ್ದೆ. ಬಳಿಕ ಮಗುವನ್ನು ಅತ್ತೆ ಕೈಗೆ ಕೊಟ್ಟು ಅಡುಗೆ ಮನೆಗೆ ಹೋಗಿದ್ದೆ. ಬಂದು ನೋಡುವಷ್ಟರಲ್ಲಿ ಅತ್ತೆ ಕೈಯಲ್ಲಿ ಮಗು ಇರಲಿಲ್ಲ. ಮಗುವನ್ನ ಯಾರೋ ತೆಗೆದುಕೊಂಡು ಹೋಗಿದ್ದಾರೆ ಎಂದು ಅತ್ತೆ ಹೇಳಿದ್ದಳು. 

ಅಕ್ಕಪಕ್ಕದ ಮನೆ ಹಾಗೂ ಮನೆಯ ಸುತ್ತ ಹುಡುಕಾಟ ನಡೆಸಿದೆವು. ಈ ವೇಳೆ ಮನೆ ಹಿಂಭಾಗದಲ್ಲಿ ಮಗು ಬಿದ್ದಿತ್ತು,” ಎಂದು ಸೆಲ್ವಿ ದೂರಿನಲ್ಲಿ ತಿಳಿಸಿದ್ದಾರೆ.

ಮಗುವಿನ ಕತ್ತಿನ ಬಳಿ ಗಾಯದ ಗುರುತು ಪತ್ತೆಯಾಗಿದೆ. ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರೋ ಶಂಕೆ ಇದೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಪ್ರಕರಣದ ಬಗ್ಗೆ ತಪ್ಪೊಪ್ಪಿಕೊಂಡಿರುವ ಪರಮೇಶ್ವರಿ ತನ್ನ ಮಗನ ಒಪ್ಪಿಗೆಯ ಮೇರೆಗೆ ಮಗವನ್ನು ಮೊದಲ ಮಹಡಿಯಿಂದ ಎಸೆದುಕೊಂದಿರುವುದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com