'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ 

ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ.
'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ
'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ
Updated on

ಹಾವೇರಿ: ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ವಿವಾದ ಉಂಟಾಗಿದ್ದು, ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ ಎಂದು ಫೇಸ್ ಬುಕ್ ನಲ್ಲಿ ಸಲೀಂ ಅಹ್ಮದ್ ಎಂಬ ವ್ಯಕ್ತಿ ಕರೆ ನೀಡಿದ್ದಾನೆ. 

ಈ ಸಲೀಂ ಅಹ್ಮದ್ ಹಾವೇರಿಯ ಜಿಲ್ಲೆಯವನಾಗಿದ್ದು, ಹಿಂದೂ ಯುವತಿಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಪೋಸ್ಟ್ ಹಾಕಿದ ಬೆನ್ನಲ್ಲೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ ಅಹ್ಮದ್ ಪೋಸ್ಟ್ ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವು ಸಂಘಟನೆಗಳು ಇದನ್ನು ಗುರುತಿಸಿ ಈ ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದವು. 

ಪೋಸ್ಟ್ ಹಾಕಿದ್ದ ಕೆಲವೇ ಗಂಟೆಗಳಲ್ಲಿ ಹಾವೇರಿಯ ಹಂಸಭಾವಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com