ಬೀದರ್ : ಏಕಾಏಕೀ ಹೊತ್ತಿ ಉರಿದ ಕಾರು, ಮಹಿಳೆ ಸಜೀವ ದಹನ 

ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೀದರ್:  ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಏಕಾಏಕಿ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರು ಹೊತ್ತಿ ಉರಿದು ಮಹಿಳೆ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ.

ಕಾರಿಗೆ ಬೆಂಕಿ ತಗುಲಿದ ಗಲಿಬಿಲಿಯಲ್ಲಿ ಸೀಟ್ ಬೆಲ್ಟ್ ತೆಗೆಯಲಾಗದೆ ಕಾರಿನಲ್ಲೆ 42 ವರ್ಷದ ಕಲ್ಯಾಣಿ ಎಂಬ ಮಹಿಳೆ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಒಂದೇ ಕುಟುಂಬದ ನಾಲ್ಕು ಜನ ಕಾರಿನಲ್ಲಿ ಇಂದು ಬೆಳಗಿನ ಜಾವ ಮಹಾರಾಷ್ಟ್ರ ಉದಗೀರ್ ನಿಂದ ಹೈದ್ರಾಬಾದ್ ಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಪತಿ ಉದಯ ಕುಮಾರ್ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com