ಕೆಂಪೇಗೌಡ ಅಧ್ಯಯನ ಪೀಠ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ 

ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.
ಕೆಂಪೇಗೌಡ ಪ್ರತಿಮೆ
ಕೆಂಪೇಗೌಡ ಪ್ರತಿಮೆ
Updated on

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.

ರಾಜರಾಜೇಶ್ವರಿ ನಗರ ವಲಯದಲ್ಲಿ ತನ್ನದ್ ಅನುದಾನದ ಹಣದಲ್ಲಿ ಕೆಂಪೇಗೌ ವಿಶ್ವ ವಿದ್ಯಾನಿಲಯ ಸ್ಥಾಪಿಸುವುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ.

ಈ ಹಿಂದೆ ಬಜೆಟ್ ನಲ್ಲಿ ಹಣದ ಕೊರತೆಯಿರುವ ಕಾರಣ ಕೆಂಪೇಗೌಡ ವಿವಿ ಸ್ಥಾಪಿಸಲು  ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು, ಆದರೆ ಇದಕ್ಕೆ ವ್ಯಾಪಕ ವಿರೋಧ , ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ  ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಿದೆ. 

ಕಾಮಗಾರಿಯನ್ನು ಕಡ್ಡಾಯವಾಗಿ ಬಿಬಿಎಂಪಿ ಅನುದಾನದಲ್ಲೇ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿಯು ಮುಂದಿನ ಸಾಲಿನ ಬಜೆಟ್‌ನಲ್ಲಿ ಮೀಸಲಿಡಬೇಕು. ಕಾಮಗಾರಿಯನ್ನು ಕೆಟಿಪಿಪಿ ಕಾಯ್ದೆ/ನಿಯಮಗಳಿಗೆ ಅನುಸಾರವಾಗಿಯೇ ಅನುಷ್ಠಾನಗೊಳಿಸಬೇಕು ಎಂದು  ನಗರಾಭಿವೃದ್ಧಿ ಇಲಾಖೆ ಷರತ್ತು ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com