ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಬೆಂಬಲಿಗ ಹೃದಯಾಘಾತದಿಂದ ಸಾವು

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶರತ್ ಬಚ್ಚೇಗೌಡ
ಶರತ್ ಬಚ್ಚೇಗೌಡ

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶರತ್ ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ 11,466 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಬಚ್ಚೇಗೌಡ ಬೆಂಬಲಿಗ ರಿಯಾಜ್ ಬೇಗ್ [50] ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶರತ್ ಬಚ್ಚೇಗೌಡ ಗೆಲುವು ಖಚಿತವಾಗುತ್ತಿದ್ದಂತೆ ಕಟ್ಟಿಗೇನಹಳ್ಳಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದ ರಿಯಾಜ್ ಬೇಗ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಚಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com