ರಾಮನಗರ: ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಬಿಗ್ ರಿಲೀಫ್ ದೊರೆತಿದ್ದು, ನಿತ್ಯಾನಂದ ಖುದ್ದು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ರಾಮನಗರದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸಿನ ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ ಹೀಗಾಗಿ ವಿನಾಯಿತಿ ನೀಡಬೇಕು ಎಂದು ಹೈಕೋರ್ಟ್ ಮೊರೆಹೋಗಿದ್ದ ನಿತ್ಯಾನಂದನಿಗೆ ಹೈಕೋರ್ಟ್ ಅರ್ಜಿ ಪುರಸ್ಕರಿಸಿ ವಿನಾಯಿತಿ ನೀಡಿದೆ.
ಸದ್ಯಕ್ಕೆ ನಿತ್ಯಾನಂದ ಸ್ವಾಮಿಗೆ ಕೋರ್ಟ್ಗೆ ಹಾಜರಾಗುವ ವಿನಾಯಿತಿ ಸಿಕ್ಕಿದೆ. ಸದ್ಯ, ಅತ್ಯಾಚಾರ ಪ್ರಕರಣದ ಸಾಕ್ಷಿದಾರರ ವಿಚಾರಣೆ ನಡೆಯುತ್ತಿದ್ದು, ನಾಳೆಗೆ ಸಾಕ್ಷಿದಾರರ ವಿಚಾರಣೆಯನ್ನು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ಕೋರ್ಟ್ ಮುಂದೂಡಿದೆ.
Advertisement