ಅತ್ಯಾಚಾರ ಪ್ರಕರಣ: ಬಿಡದಿ ನಿತ್ಯಾನಂದಗೆ ಬಿಗ್‌ ರಿಲೀಫ್‌!

ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಬಿಗ್‌ ರಿಲೀಫ್‌ ದೊರೆತಿದ್ದು, ನಿತ್ಯಾನಂದ ಖುದ್ದು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ನಿತ್ಯಾನಂದ
ನಿತ್ಯಾನಂದ

ರಾಮನಗರ:  ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಬಿಗ್‌ ರಿಲೀಫ್‌ ದೊರೆತಿದ್ದು, ನಿತ್ಯಾನಂದ ಖುದ್ದು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ರಾಮನಗರದ ‌3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸಿನ ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ ಹೀಗಾಗಿ ವಿನಾಯಿತಿ ನೀಡಬೇಕು ಎಂದು ಹೈಕೋರ್ಟ್​ ಮೊರೆಹೋಗಿದ್ದ ನಿತ್ಯಾನಂದನಿಗೆ ಹೈಕೋರ್ಟ್​ ಅರ್ಜಿ ಪುರಸ್ಕರಿಸಿ ವಿನಾಯಿತಿ ನೀಡಿದೆ. 

ಸದ್ಯಕ್ಕೆ ನಿತ್ಯಾನಂದ ಸ್ವಾಮಿಗೆ ಕೋರ್ಟ್‌ಗೆ ಹಾಜರಾಗುವ ವಿನಾಯಿತಿ ಸಿಕ್ಕಿದೆ. ಸದ್ಯ, ಅತ್ಯಾಚಾರ ಪ್ರಕರಣದ ಸಾಕ್ಷಿದಾರರ ವಿಚಾರಣೆ ನಡೆಯುತ್ತಿದ್ದು, ನಾಳೆಗೆ ಸಾಕ್ಷಿದಾರರ ವಿಚಾರಣೆಯನ್ನು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ಕೋರ್ಟ್ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com