ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಉಪಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com