ರಾಜ್ಯ
ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್ಟಿಸಿ ಬೈಕ್ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!
ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.
ಮೃತರನ್ನು ಬೇಲೂರು ತಾಲ್ಲೂಕಿನ ಮದಘಟ್ಟದ ಅಭಿ(21) ಹಾಗೂ ಚಂದನ್(22) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ವೊಂದನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ ಬೈಕ್ ಮೇಲೆ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.