ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ

ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.
ಹೊಸಪೇಟೆ ಬ್ರಹತ್ ಪ್ರತಿಭಟನಾ ಮೆರವಣಿಗೆ
ಹೊಸಪೇಟೆ ಬ್ರಹತ್ ಪ್ರತಿಭಟನಾ ಮೆರವಣಿಗೆ
Updated on

ಹೊಸಪೇಟೆ: ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.

ನಗರದ ಅಂಜುಮನ್ ಸಂಸ್ಥೆ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಬಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯೆಕ್ತಪಡಿಸಿದರು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಈದ್ಗಾ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. 

ಕೇಂದ್ರ ಸರ್ಕಾರ ಕೂಡಲೆ ಮಸೂದೆಯನ್ನ ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಇನ್ನು ಹೊಸಪೇಟೆ ನಗರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನ ಒಟ್ಟಿಗೆ ಸೇರಿ ಇಷ್ಟೊಂದು ದೊಡ್ಡಮಟ್ಟದ ಪ್ರತಿಭಟನೆ ನಡೆಸಿದ್ದು ಇದೇ ಮೊದಲು ಬಾರಿಗೆ ಎನ್ನಲಾಗಿದೆ. ಹಾಗಾಗಿ ಸ್ಥಳೀಯ ಪೋಲಿಸರು ಕೂಡ ಹೆಚ್ಚಿನ ಭದ್ರತೆ ಒದಗಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚರಿಕೆ ವಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com