ರಾಯಚೂರು: ಲಾರಿ ಪಲ್ಟಿ, ಇಬ್ಬರು ಸಾವು
ರಾಯಚೂರು: ಲಾರಿ ಪಲ್ಟಿ, ಇಬ್ಬರು ಸಾವು

ರಾಯಚೂರು: ಲಾರಿ ಪಲ್ಟಿ, ಇಬ್ಬರು ಸಾವು

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. 
Published on

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ 40 ವರ್ಷದ ರಾಜೇಶ್ ಹಾಗೂ ಜ್ಯೋತಿ (35) ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದಾರೆ. 

ಭತ್ತವನ್ನು ಕೊಂಡೊಯ್ಯುತ್ತಿದ್ದ ಲಾರಿ ರಸ್ತೆ ಪಕ್ಕದ ಬಸ್ ಸ್ಟ್ಯಾಂಡಿಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ.ಈ ವೇಳೆ ಲಾರಿಯಲ್ಲಿದ್ದ ಭತ್ತದ ಚೀಲಗಳು ಗುಡಿಸಲ ಮೇಲೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. 

ಘಟನೆ ಕುರಿತಂತೆ ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com