ಮಂಗಳೂರು ಗೋಲಿಬಾರ್: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್'ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಮಂಗಳೂರು: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗೋಲಿಬಾರ್'ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. 

ನಗರದ ಸರ್ಕಿಟ್ ಹೌಸ್ ನಲ್ಲಿ ಸಭೆ ನಡೆಸಲು ಆಗಮಿಸಿರುವ ಯಡಿಯೂರಪ್ಪ ಅವರು ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದ ಇಬ್ಬರು ವ್ಯಕ್ತಿಗಳ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆಂದು ತಿಳಿದುಬಂದಿದೆ. 

ಇದಕ್ಕೂ ಮುನ್ನ ಮಂಗಳೂರು ವಿಮಾನನಿಲ್ದಾಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮರ್ ಕುಮಾರ್ ಪಾಂಡೆ ಅವರ ಜೊತೆ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com