'ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಯೇಸು ಪ್ರತಿಮೆ ಸ್ಥಾಪಿಸಿ ಪೌರುಷ ಪ್ರದರ್ಶಿಸಲು ಸಜ್ಜು'

ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಬಿಜೆಪಿ ನಾಯಕರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಬಿಜೆಪಿ ನಾಯಕರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

ಕನಕಪುರದ ಕಪಾಲಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಲಾಗ್ತಿರುವ ಯೇಸುಕ್ರಿಸ್ತನ ಪ್ರತಿಮೆ ಬಗ್ಗೆ ಸಂಸದ ಅನಂತಕುಮಾರ್​ ಹೆಗಡೆ ಅಪಸ್ವರ ಎತ್ತಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಇಲ್ಲೊಬ್ಬ #TiharReturned ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತೀ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ ಎಂದಿದ್ದಾರೆ.

ಅಲ್ಲದೆ ಓಲೈಕೆ ರಾಜಕೀಯಕ್ಕೆ ಪೈಪೋಟಿ ನೀಡಲು ಕಾಂಗ್ರೆಸ್​ನಲ್ಲಿ ಇನ್ನು ಹೆಚ್ಚಿನ ಗುಲಾಮರು ಅಖಾಡಕ್ಕೆ ಇಳಿದರು ಅಚ್ಚರಿಯಿಲ್ಲ ಅಂತಾ ವ್ಯಂಗ್ಯವಾಡಿದ್ದಾರೆ. ಕ್ರೈಸ್ತರಾಗಿ ಮತಾಂತರ ಹೊಂದಿದವರಿಗೆ ಮಾತ್ರ ಕಾಂಗ್ರೆಸ್​ನಲ್ಲಿ ಇಟಲಿಯಮ್ಮ ಮಣೆ ಹಾಕುವುದು. ಈ ಸಂಪ್ರದಾಯ ಅರಿಯದ ಆ ಪಕ್ಷದ ಬಾಕಿ ನಾಯಕರು, ಈಗಲಾದರೂ ಆತ್ಮ-ಸಾಕ್ಷಿ ಇದ್ದಲ್ಲಿ ತಮ್ಮ ಗುಲಾಮಿ ಮನೋಭಾವವನ್ನು ತಿರಸ್ಕರಿಸಿ ಆ ಪಕ್ಷದ ವ್ಯವಸ್ಥೆಯನ್ನು ಧಿಕ್ಕರಿಸಿ ಹೊರಬರಲಿ ಎಂದಿದ್ದಾರೆ.

ಸಚಿವ ಕೆ.ಎಸ್​. ಈಶ್ವರಪ್ಪ ಟ್ವೀಟ್​ ಮೂಲಕ ಕಿಡಿಕಾರಿದ್ದು, ನಮ್ಮ ಪವಿತ್ರ ದೇಶದಲ್ಲೇ ಹುಟ್ಟಿದ ಪ್ರಭು ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು, ತಮ್ಮ ನಾಯಕಿಯನ್ನು ಮೆಚ್ಚಿಸಲು ತಮ್ಮದೇ ಹಣದಲ್ಲಿ ವ್ಯಾಟಿಕನ್​ನಲ್ಲಿ ಹುಟ್ಟಿದ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಇನ್ನು ಇವರು ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸ್ವತಃ ಸಿದ್ದರಾಮಯ್ಯನವರಿಗೂ ಆಗುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com