ಬೆಂಗಳೂರು: ಫಾರಿನ್ ಟ್ರಿಪ್ಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೂ ಸಿಕ್ಕಾಪಟ್ಟೆ ನಂಟು. ಅದರಲ್ಲೂ ಸಿಂಗಾಪುರ್ ಅಂದ್ರೆ ಹೆಚ್ಡಿಕೆಗೆ ಎಲ್ಲಿಲ್ಲದ ಪ್ರೀತಿ. ಸಮಯ ಸಿಕ್ಕಾಗಲೆಲ್ಲಾ ಸಿಂಗಾಪುರ್ ಗೆ ಹೋಗುತ್ತಲೇ ಇರುತ್ತಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆ ಉಪ ಚುನಾವಣೆಯ ಸತತ ಸೋಲಿನಿಂದ ಕಳೆಗುಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೊಸ ವರ್ಷವನ್ನು ಸಿಂಗಾಪುರದಲ್ಲಿ ಆಚರಿಸಲು ಇಂದು ರಾತ್ರಿ ಪ್ರಯಾಣ ಬೆಳೆಸಲಿದ್ದಾರೆ.
ಪಕ್ಷ ಸಂಘಟನೆ, ರಾಜಕೀಯವಾಗಿ ಹಿನ್ನೆಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಹೊಸ ವರ್ಷ ಆಚರಿಸಿಕೊಂಡು ಹೊಸ ಉಲ್ಲಾಸದೊಂದಿಗೆ ಕುಮಾರ ಸ್ವಾಮಿ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗಿದೆ.
ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಗೋವಾದಲ್ಲಿ ಹೆಂಡತಿ ಮಗನೊಂದಿಗೆ ಆಚರಿಸಿಕೊಂಡಿದ್ದರು. ಇದೀಗ ಹೊಸ ವರ್ಷವನ್ನು ವಿದೇಶದಲ್ಲಿ ಸ್ವಾಗತಿಸಲಿದ್ದಾರೆ.
ಕಳೆದ ಎರಡು-ಮೂರು ವರ್ಷಗಳಿಂದ ಕುಮಾರಸ್ವಾಮಿ ಹೊಸ ವರ್ಷವನ್ನು ಸಿಂಗಾಪುರ್ ನಲ್ಲಿಯೇ ಆಚರಣೆ ಮಾಡುತ್ತಿದ್ದಾರೆ. ಕಳೆದ ವರ್ಷ ಸಿಎಂ ಆಗಿದ್ದಾಗಲೂ ಅವರು ಸಿಂಗಾಪುರ್ ಗೆ ಹೋಗಿದ್ರು. ಈಗ ಉಪ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಸ್ವಲ್ಪ ರಾಜಕೀಯ ಚಟುವಟಿಕೆಯಿಂದ ಹೆಚ್ಡಿಕೆ ದೂರ ಉಳಿದಿದ್ದಾರೆ.
Advertisement