ಪ್ರಖರ ಹಿಂದುತ್ವವಾದಿ ಪೇಜಾವರ ಶ್ರೀಗಳ ಕಾರು ಚಾಲಕನಾಗಿದ್ದು ಓರ್ವ ಮುಸ್ಲಿಂ!

ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ ಆಗಿದ್ದರು.
ಪೇಜಾವರ ಶ್ರೀಗಳು
ಪೇಜಾವರ ಶ್ರೀಗಳು
Updated on

ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ ಆಗಿದ್ದರು.

ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ. ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ.

ಹೌದು ಪೇಜಾವರ ಶ್ರೀಗಳ ಮಹಮ್ಮದ್ ಅಖಿರ್ ಮೂರು ವರ್ಷ, ಮಹಮ್ಮದ್ ಮನ್ಸೂರ್ ಏಳು ವರ್ಷ, ನಂತರ ಮಹಮ್ಮದ್ ಆರೀಫ್ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಮಹಮ್ಮದ್ ಆರೀಫ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾಗಲೇ ಶ್ರೀ ಕೃಷ್ಣ ಮಠದಲ್ಲಿ ಸೌಹಾರ್ದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದು ತೀವ್ರ ಟೀಕೆಗೆ ಗುರಿಯಾಗಿತ್ತು. ಆದರೆ ಯಾವುದೇ ಟೀಕೆಗಳು ಎದುರಾದಾಗಲೂ ಶ್ರೀಗಳು ಮಾತ್ರ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com