ಘಟನೆಯಲ್ಲಿ ಮರಿತಿಬ್ಬೇಗೌಡ, ಕಲಮಳ್ಳಿ ಶಿವಕುಮಾರ್, ಹೊಸಕೋಟೆ ದೇವಣ್ಣ ಮತ್ತು ಇತರ ಮೂವರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಅವರಿಗೆ ಕೂಡಲೇ ಸುತ್ತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುತ್ತೂರು ಶ್ರೀಗಳು, ಇದೊಂದು ದುರದೃಷ್ಟಕರ ಘಟನೆ, ಯಾವುದೇ ಹಾನಿ ಇಲ್ಲದೆ ತಾವು ಪಾರಾಗಿದ್ದು, ಗಾಯಗೊಂಡವರಿಗೆ ಜಾತ್ರಾ ಅಂಗವಾಗಿ ಆರಂಭಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ. ಜನರು ಯಾವುದೇ ಭೀತಿಗೆ ಒಳಗಾಗಬಾರದು ಎಂದು ಅವರು ಭಕ್ತರಿಗೆ ಮನವಿ ಮಾಡಿಕೊಂಡರು. ಸ್ವಲ್ಪ ಸಮಯದ ನಂತರ ಕುಸ್ತಿ ಪಂದ್ಯಗಳು ನಡೆದವು.
ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಲವು ಸಚಿವರುಗಳು, ಸ್ವಾಮೀಜಿ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಘಟನೆಯ ಕುರಿತು ಮಾಹಿತಿ ಪಡದುಕೊಂಡರು.